ಇಬ್ಬರು ಮಕ್ಕಳು ಸೇರಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿಜಯನಗರ 4ನೇ ಹಂತದಲ್ಲಿ ಗುರುವಾರ ಮುಂಜಾನೆ ಜರುಗಿದೆ.
ತಾಲ್ಲೂಕಿನ ಕೆರೆ ಗ್ರಾಮ ಪಂಚಾಯಿತಿಯ ಹೆಗ್ಗಾನ್ ಸಮೀಪ ಬುಧವಾರ ಹಾಡಹಗಲೇ ನಕ್ಸಲರು ಮತ್ತು ನಕ್ಸಲ್ ನಿಗ್ರಹ ಪಡೆಯ (ಎಎನ್ಎಫ್) ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದ್ದು, ಘಟನೆಯಲ್ಲಿ ಎಎನ್ಎಫ್ ಸಿಬ್ಬಂದಿಯೊಬ್ಬರು ಗಾಯಗೊಂಡಿದ್ದಾರೆ.
ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳಿಗೆ ಪ್ರತಿ ಕೆ.ಜಿ.ಗೆ ರೂ. 1 ದರದಲ್ಲಿ ತಿಂಗಳಿಗೆ 30 ಕೆ.ಜಿ. ಅಕ್ಕಿ ವಿತರಿಸುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರ್ಧಾರದಿಂದ ರಾಜ್ಯ ಸರ್ಕಾರದ ಬೊಕ್ಕಸದ ಮೇಲೆ ವಾರ್ಷಿಕ ರೂ. 2,373 ಕೋಟಿ ಹೊರೆ ಬೀಳಲಿದೆ.
ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಕ್ಷಣವೇ ರಾಜ್ಯದಲ್ಲಿರುವ ಎಲ್ಲ ಬಿಪಿಎಲ್ ಮತ್ತು ಅಂತ್ಯೋದಯ ಪಡಿತರ ಚೀಟಿದಾರರಿಗೆ ಜೂನ್ ತಿಂಗಳಿನಿಂದ ಒಂದು ರೂಪಾಯಿಗೆ ಒಂದು ಕೆ.ಜಿ. ಅಕ್ಕಿ ನೀಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಅಧಿಕಾರ ವಹಿಸಿಕೊಂಡ ಕೂಡಲೇ ಪ್ರಕಟಿಸಿದ `ಬಂಪರ್ ಕೊಡುಗೆ'ಗಳಿಗೆ ಕೆಲವು ಹಿರಿಯ ಅಧಿಕಾರಿಗಳ ಸಹಮತ ಇರಲಿಲ್ಲ. ಅವರ ಸಲಹೆಗಳನ್ನು ಬದಿಗೊತ್ತಿರೂ 4,400 ಕೋಟಿಗೂ ಅಧಿಕ ಮೊತ್ತದ ಯೋಜನೆಗಳನ್ನು ಘೋಷಿಸಲಾಯಿತೆಂಬ ಸಂಗತಿ ತಡವಾಗಿ ಬೆಳಕಿಗೆ ಬಂದಿದೆ.
`ರಾಜ್ಯದಲ್ಲಿ 9 ವರ್ಷಗಳ ನಂತರ ಸಂಪೂರ್ಣ ಬಹುಮತದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದ್ದು, ರಾಜೀವ್ ಗಾಂಧಿ ಅವರ ಆದರ್ಶ ಹಾಗೂ ಚಿಂತನೆಗಳ ಸಾಕಾರಕ್ಕೆ ಕ್ರಮ ಕೈಗೊಳ್ಳಬೇಕು' ಎಂದು ವಿಧಾನ ಪರಿಷತ್ ಸದಸ್ಯ ಎಂ.ವಿ.ರಾಜಶೇಖರನ್ ಆಶಿಸಿದರು.
ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ಪಟ್ಟಿ ಮುಂದಿನ ವಾರ ಪ್ರಕಟವಾಗುವ ನಿರೀಕ್ಷೆ ಇದ್ದು, ಮಹಿಳೆಯರಿಗೆ ಶೇ 50ರಷ್ಟು ಮೀಸಲಾತಿ ದೊರೆಯಲಿದೆ.
ಬುಧವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ದಕ್ಷಿಣ ಒಳನಾಡಿನಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಬ್ಯಾಡಗಿಯಲ್ಲಿ ಒಂದು ಸೆಂ.ಮೀ ಮಳೆಯಾಗಿದೆ. ರಾಯಚೂರಿನಲ್ಲಿ ಗರಿಷ್ಠ ಉಷ್ಣಾಂಶ 41.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಬೇಲೆಕೇರಿ ಅದಿರು ನಾಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ಸಿಬಿಐ, ಜಿಲ್ಲೆಯಲ್ಲಿ ಬುಧವಾರ ಮಾಜಿ ಸಚಿವ ಜಿ.ಜನಾರ್ದನ ರೆಡ್ಡಿ ಆಪ್ತರಿಬ್ಬರನ್ನು ಬಂಧಿಸಿದೆ.
ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಾದ್ಯಂತ ಒಣಹವೆ ಮುಂದುವರೆದಿದೆ. ಗುಲ್ಬರ್ಗದಲ್ಲಿ ಗರಿಷ್ಠ ಉಷ್ಣಾಂಶ 41.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಭಾರ್ತಿ ಏರ್ಟೆಲ್, ಇದೀಗ ಧರ್ಮಸ್ಥಳ, ಬೆಳ್ತಂಗಡಿ ಮತ್ತು ಉಜಿರೆಯಲ್ಲಿ `ಲೈವ್ ಆರತಿ ಸೇವೆ' ಆರಂಭಿಸಿದೆ. ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಅವರು ಮಂಗಳವಾರ ಈ ಸೇವೆಗೆ ಚಾಲನೆ ನೀಡಿದರು.
ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಅಕ್ರಮ ಗಣಿಗಾರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಸಿಬಿಐ ನ್ಯಾಯಾಲಯಕ್ಕೆ ಬುಧವಾರ ಹಾಜರಾದರು.